೨೦೨೪-೨೫ ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ ೧೦೦ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್.ಸಿ.ಪಿ-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, ಸರ್ಪಕವಾಗಿ ಬಳಕೆಯಾಗಬೇಕು. ಕೆಲವು ಇಲಾಖೆಗಳು ಈಗಾಗಲೇ ಶೇಕಡ ೧೦೦ ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಫೆಬ್ರವರಿ ಅಂತ್ಯದೊಳಗೆ ಸಂಪರ್ಣ ಅನುದಾನ ರ್ಚು ಮಾಡಿ ಪ್ರಗತಿ ವರದಿ ನೀಡಬೇಕು ಎಂದರು.
ಫಲಾನುಭವಿಗಳ ಆಯ್ಕೆ ಪಾರರ್ಶಕವಾಗಿರಬೇಕು, ರ್ಹ ಫಲಾನುಭವಿಗಳನ್ನು ಗುರುತಿಸಿ ಅವಶ್ಯಕತೆ ಇರುವವರಿಗೆ ಸೌಲಭ್ಯ ಕಲ್ಪಿಸಿ. ಪ.ಜಾತಿ, ಪ.ಪಂಗಡಗಳು ವಾಸಿಸುವ ಗ್ರಾಮಗಳಲ್ಲಿ ಹದಗೆಟ್ಟ ರಸ್ತೆಗಳನ್ನು ಗುರುತಿಸಿ ರಸ್ತೆಗಳನ್ನು ನರ್ಮಿಸಿ. ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಈಗಿನ ರ್ಥಿಕ ಸ್ಥಿತಿಗತಿ, ಅನುದಾನ ಸದ್ಬಳಕೆ ಆಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ ವರದಿ ನೀಡಿ ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೃಷಿ ಇಲಾಖೆ ಜಂಟಿ ನರ್ದೇಶಕಿ ಕಲಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವರ್ತಾ ಮತ್ತು ಸರ್ವಜನಿಕ ಸಂರ್ಕ ಇಲಾಖೆಯ ಉಪನರ್ದೇಶಕರಾದ ಅಶೋಕ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನರ್ದೇಶಕ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.