ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಆಡಳಿತಾರೂಢ ಕಾಂಗ್ರೆಸ್ ನ ಎಂಎಲ್‌ಸಿಗಳ ನಿಯೋಗ ಗುರುವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರ ವಿರುದ್ಧ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ವಿರುದ್ಧ ರವಿಕುಮಾರ್ ನೀಡಿದ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಫೌಜಿಯಾ ಅವರು ಐಎಎಸ್ ಅಧಿಕಾರಿಯೋ ಅಥವಾ “ಪಾಕಿಸ್ತಾನದಿಂದ ಬಂದವರೋ” ಎಂದು ರವಿಕುಮಾರ್ ಹೇಳಿದ್ದು, ಇದು ವ್ಯಾಪಕ ಖಂಡನೆಗೆ ಕಾರಣವಾಗಿದೆ.
ಇನ್ನು ಇತ್ತೀಚೆಗೆ ಛಲವಾದಿ ನಾರಾಯಣಸ್ವಾಮಿ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ರ‍್ಗೆ ಅವರನ್ನು ನಾಯಿಗೆ ಹೋಲಿಸಿದ್ದರು.
ವಿಧಾನ ಪರಿಷತ್‌ನ ಆಡಳಿತ ಪಕ್ಷದ ನಾಯಕರಾದ ಎನ್‌.ಎಸ್‌.ಭೋಸರಾಜು ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಈ ಇಬ್ಬರು ಬಿಜೆಪಿ ಎಂಎಲ್ ಸಿಗಳ ವಿರುದ್ಧ ದೂರು ನೀಡಿದೆ.

error: Content is protected !!