ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಹಿಂದಿನ ಮಾಸ್ಟರ್ಮೈಂಡ್ ಎಂದು ಹೇಳಲಾದ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸೈಫುಲ್ಲಾ ಕಸೂರಿ ಬುಧವಾರ ಮತ್ತೆ ಸರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಪಾಕಿಸ್ತಾನದ ರಾಜಕೀಯ ನಾಯಕರು ಮತ್ತು ಇತರ ವಾಂಟೆಡ್ ಭಯೋತ್ಪಾದಕರೊಂದಿಗೆ ರಾಜಕೀಯ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ.
ಪಾಕಿಸ್ತಾನದ ಪರಮಾಣು ಪರೀಕ್ಷೆಗಳ ಸ್ಮರಣರ್ಥ ಪಂಜಾಬ್ ಪ್ರಾಂತ್ಯದ ಕಸೂರ್ನಲ್ಲಿ ಪಾಕಿಸ್ತಾನ್ ಮರ್ಕಾಜಿ ಮುಸ್ಲಿಂ ಲೀಗ್ ಪಕ್ಷ ಆಯೋಜಿಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡ ಸೈಫುಲ್ಲಾ ಕಸೂರಿ, ಭಾರತದ ವಿರುದ್ಧ ಘೋಷಣೆ ಕೂಗಿ, ಪ್ರಚೋದನಾಕಾರಿ ಭಾಷಣ ಮಾಡಿದ್ದಾನೆ.
ಈಗ ನಾನು ಇಡೀ ಪ್ರಪಂಚದಲ್ಲಿ ಪ್ರಸಿದ್ಧಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಂದು ನನ್ನನ್ನು ದೂಷಿಸಲಾಯಿತು. ಈಗ ನನ್ನ ಹೆಸರು ಇಡೀ ಪ್ರಪಂಚದಲ್ಲಿ ಪ್ರಸಿದ್ಧವಾಗಿದೆ ಎಂದು ಹೇಳಿದ್ದಾನೆ. ಎಲ್ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಅವರ ಪುತ್ರ ಮತ್ತು ಭಾರತದಿಂದ ಭಯೋತ್ಪಾದಕ ಎಂದು ಘೋಷಿಸಲಾದ ತಲ್ಹಾ ಸಯೀದ್ ಮತ್ತಿತರರ ಉಗ್ರರು ಇದರಲ್ಲಿ ಪಾಲ್ಗೊಂಡಿದ್ದರು