ದೆಹಲಿ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕರ್ಯಾಚರಣೆಯಲ್ಲಿ ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ನೆಲೆಸಿದ್ದ ಮೂವರು ಮಕ್ಕಳು ಸೇರಿದಂತೆ ೯ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ದೂರೆತ ಖಚಿತ ಮಾಹಿತಿ ಆಧಾರದ ಮೇಲೆ ತಂಡವು ಮೇ ೨೫ ರಂದು ನರೇಲಾ ಪ್ರದೇಶದಲ್ಲಿ ಕರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ಅವರು ಮಾನ್ಯವಾದ ಯಾವುದೇ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ.
ಯಾವುದೇ ಗುರುತಿನ ದಾಖಲೆಗಳಿಲ್ಲದೆ ರಸ್ತೆಬದಿಯಲ್ಲಿ ಉಳಿದುಕೊಂಡಿದ್ದ ನಾಲ್ವರು ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಾ ಬದುಕುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.